ದಾವಣಗೆರೆ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜಿರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ 5000 ಪೊಲೀಸ್ ಕಾನ್ಸ್ ಟೇಬಲ್ ಹಾಗೂ 500 ಪಿಎಸ್ ಐ ಗಳನ್ನು ನೇಮಕ ಮಾಡಲು ಅಧಿಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಿಗೆ ಅಗತ್ಯವಾದ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ ಪೊಲೀಸ್ ಇಲಾಖೆಯಲ್ಲಿ 5 ಸಾವಿರ ಕಾನ್ಸ್ ಟೇಬಲ್ ಹಾಗೂ 500 ಪಿಎಸ್ ಐ ಗಳನ್ನು ನೇಮಕಾತಿ ಮಾಡಲು ಅಧಿಸೂಚಿಸಲಾಗಿದೆ ಎಂದು ಹೇಳಿದರು.
ಲಾಕ್ ಡೌಣ್ ಸಡಿಲಿಕೆ ಬಳಿಕ ಅಪರಾಧ ಪ್ರಕರಣ ಹೆಚ್ಚುವ ಸಂಭವವಿದ್ದು, ನಿಯಂತ್ರಣ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now