ಕನ್ನಡದುನಿಯಾ

1.6M Followers

BREAKING: ಗುತ್ತಿಗೆ ಪೌರ ಕಾರ್ಮಿಕರಿಗೆ ಭರ್ಜರಿ ಸುದ್ದಿ: ಕೆಲಸ ಕಾಯಂ, ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಒಪ್ಪಿಗೆ

19 Sep 2022.8:15 PM

ಬೆಂಗಳೂರು: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುವುದು. ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಮಾತಿ ಮಾಡಿಕೊಳ್ಳಲಾಗುವುದು. 17000 - 28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags