Kannada News Now

1.8M Followers

BIGG NEWS : ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ : 6-8ನೇ ತರಗತಿ ಮಕ್ಕಳಿಗೆ ಇನ್ಮುಂದೆ ಪ್ರಾಥಮಿಕ ಶಿಕ್ಷಕರಿಂದ ಪಾಠ

15 Nov 2022.2:50 PM

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ 6 ರಿಂದ 8 ನೇ ತರಗತಿಯ ಪದವೀಧರ ಶಿಕ್ಷಕರ ನೇಮಕಾತಿಗೆ ಮುಂಬಡ್ತಿ ನೀಡಲು ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

BREAKING NEWS: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು | Earthquake hits Maharashtra

ಕರ್ನಾಟದಲ್ಲಿ ಹಾಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಪೈಕಿ ಶೇ.40ರಷ್ಟು ಶಿಕ್ಷಕರಿಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಆ ಶೇ. 40ರಷ್ಟು ಮಂದಿ 6 ರಿಂದ 8ನೇ ತರಗತಿ ಮಕ್ಕಳಿಗೆ ಪಾಠ ಮಾಡಲಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿ ಆದೇಶಿಸಿದೆ. ಇದರಿಂದಾಗಿ ವರ್ಷಾಂತ್ಯದ ಹೊತ್ತಿಗೆ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿಯೊಂದು ಲಭಿಸಿದಂತಾಗಿದೆ.

6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿಯ ನಿಯಮವನ್ನು ಮಾರ್ಪಡಿಸಲು ಸಹ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ಶೇ. 60 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಇದು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ/ನೇಮಕಾತಿ) ನಿಯಮಗಳಡಿ ನಡೆಯಲಿದೆ.

ಉಳಿದ ಶೇ. 40ರಷ್ಟು ಹುದ್ದೆಗಳು ಸೇವಾನಿರತ ಪ್ರಾಥಮಿಕ ಶಿಕ್ಷಕರ ಮುಂಬಡ್ತಿಯಿಂದ ಭರ್ತಿಯಾಗಲಿವೆ. 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ನಿಯಮಗಳನ್ನು ಮಾರ್ಪಡಿಸಲು ಆರ್ಥಿಕ ಇಲಾಖೆ ಸಹಮತ ವ್ಯಕ್ತಪಡಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ಶೇ.60ರಷ್ಟು ನೇರ ನೇಮಕಾತಿಯಾದರೆ, ಶೇ. 40ರಷ್ಟು ಸೇವಾನಿರತ ಶಿಕ್ಷಕರಿಗೆ ಮುಂಬಡ್ತಿ ದೊರೆಯಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags