Kannada News Now

1.8M Followers

BIGG NEWS : ಹಾವೇರಿಯಲ್ಲಿ 86 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ' : ಸರ್ಕಾರಿ ನೌಕರರಿಗೆ `ವಿಶೇಷ ಸಾಂದರ್ಭಿಕ ರಜೆ' ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

04 Jan 2023.06:35 AM

ಬೆಂಗಳೂರು : ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಷರತ್ತು ಬದ್ಧ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಸಂಖ್ಯೆ 100ಕ್ಕೆ ಮೀರದಂತೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ನೀಡಲಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿಗಳ ಪತ್ರದ ಅನ್ವಯ ಪ್ರತಿ ವರ್ಷವೂ ಈ ರಜೆಯನ್ನು ನೀಡಲಾಗುತ್ತದೆ.

ಷರತ್ತುಗಳು

  1. ವಿಶೇಷ ಸಾಂದರ್ಭಿಕ ರಜೆಯು, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ಅವರ ಆಸಕ್ತಿಯ ಒಂದು ಅಥವಾ ಎರಡು ದಿನಗಳ ಅವಧಿಗೆ ಮತ್ತು ಹೋಗಿಬರುವ ಪ್ರಯಾಣಕ್ಕೆ ಬೇಕಾಗುವ ಅವಧಿಗೆ ಸೀಮಿತವಾಗಿರಬೇಕು.
  2. ಕನ್ನಡ ಸಾಹಿತ್ಯದ ಜ್ಞಾನ ಮತ್ತು ಅಭಿರುಚಿ ಇದ್ದು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಮಂತ್ರಿಸಲ್ಪಟ್ಟ ಸರ್ಕಾರಿ ನೌಕರರಿಗೆ ಈ ರಜೆಯ ಸೌಲಭ್ಯ ನೀಡುವುದು.
  3. ಕನ್ನಡ ಸಾಹಿತ್ಯದ ಅಭಿರುಚಿಯುಳ್ಳ ನೌಕರರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿದ್ದರೆ ಅವರಿಗೂ ಈ ಸೌಲಭ್ಯ ನೀಡುವುದು.
  4. ಯಾವುದೇ ವಿಶೇಷ ಗುರುತರ ಸರ್ಕಾರಿ ಕೆಲಸದ ಮೇಲೆ ನೇಮಿಸಲ್ಪಟ್ಟ ನೌಕರರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಅನುಮತಿ ಕೊಡಬಾರದು..
  5. ಈ ಸಮ್ಮೇಳನ ಮುಗಿದಮೇಲೆ ಸಮ್ಮೇಳನದಲ್ಲಿ ಭಾಗವಹಿಸಿದ ಸರ್ಕಾರಿ ನೌಕರರಿಗೆ ಸಾಹಿತ್ಯ ಪರಿಷತ್ತಿನವರು ಅಧಿಕೃತ ರಾಜರಿಷತ್ ಕೊಡಬೇಕು. ಈ ಅಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಅಧಿಕಾರವ ಅಧಿಕಾರಿಗಳು ಈ ರಜೆಯನ್ನು ಮಂಜೂರು ಮಾಡುವುದು, ಹಾಗೂ ಈ ರಜೆ ಪಡೆಯಲಿಚ್ಛಿಸುವ ನೌಕರರು ರಜೆ ಮಂಜೂರು ಮಾಡುವ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯತಕ್ಕದ್ದು.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags