ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವಂತ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ( ZP, TP Election ) ಸಂಬಂಧ ಕ್ಷೇತ್ರ ಪುನರ್ ವಿಂಗಡಣನೆಯ ಅಧಿಸೂಚನೆ ಹೊರಡಿಸುವುದು ಬಾಕಿ ಇತ್ತು. ಈ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರವು ಹೈಕೋರ್ಟ್ ಗೆ ( Karnataka High Court ) ಮಾಹಿತಿ ನೀಡಿದೆ.
ಇಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಪಂಚಾಯ್ತಿ ಕ್ಷೇತ್ರ ವಿಂಗಡಣೆ ಕುರಿತು ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಅವರು 10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದರು ಮಾಹಿತಿ ನೀಡಿದರು.
ರಾಜ್ಯ ಸರ್ಕಾರಕ್ಕೆ ( Karnataka Government ) ಜನವರಿ 30ರಂದು ಕ್ಷೇತ್ರ ಪುನರ್ ವಿಂಗಡಣೆ ಕುರಿತಾದ ಸಮಿತಿಯ ವರದಿಯನ್ನು ನೀಡಲಾಗಿದೆ. ಆ ವರದಿಯನ್ನು ಆಧರಿಸಿ ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಈ ಮಾಹಿತಿಯನ್ನು ಪಡೆದಂತ ಹೈಕೋರ್ಟ್ ನ್ಯಾಯಪೀಠವು ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ಸಂಬಂಧ ನೀಡಿದಂತ ಹೇಳಿಕೆ ದಾಖಲಿಸಿಕೊಂಡು, 2 ವಾರ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now