ಜುಲೈ 5ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 5ರಿಂದ ಶಾಲೆಯನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಆದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಆಸಕ್ತಿ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಚಿಂತನೆ ನಡೆದಿದೆ ಎಂದರು.
ಈಗಾಗಲೇ 1ರಿಂದ 6ನೇ ತರಗತಿ ಹಾಗೂ 6ರಿಂದ 10ನೇ ತರಗತಿ ವರೆಗೂ ಶಾಲೆಗಳನ್ನು ಆರಂಭಿಸುವ ಕುರಿತು ಕೇಂದ್ರ ಸರಕಾರಿದಿಂದ ಮಾರ್ಗಸೂಚಿ ಬಂದಿದೆ. ಇದನ್ನು ಪರಿಶೀಲಿಸಿ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಹೊರಡಿಸಲಿದೆ ಎಂದರು.
ಜುಲೈ ಕೊನೆಯ ವಾರದಲ್ಲಿ ಪಿಯುಸಿ ಫಲಿತಾಂಶ ಹೊರಬೀಳಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ ಎಂದು ಸಚಿವರು ತಿಳಿಸಿದರು.
Disclaimer
This story is auto-aggregated by a computer program and has not been created or edited by Dailyhunt Publisher: Kannadavahini