ನವದೆಹಲಿ : ಯುಜಿಸಿ ಆದೇಶದಂತೆ ಯಾವುದೇ ರಾಜ್ಯವು ಅಂತಿಮ ಪರೀಕ್ಷೆಯಿಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸಾಧ್ಯವಿಲ್ಲ ಅಂತ ಹೇಳಿದೆ. ಪರೀಕ್ಷೆಗಳಿಲ್ಲದೆ ಪದವಿಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ. ಇದೇ ವೇಳೆ ನ್ಯಾಯಪೀಠ ಪರೀಕ್ಷೆಗಳನ್ನು ಪರಿಣಾಮಕಾರಿಯಾಗಿ ಮುಂದೂಡಬಹುದು ಮತ್ತು ನಂತರ ನಡೆಸಬಹುದು. ಸೆಪ್ಟೆಂಬರ್ 30 ರ ಗಡುವನ್ನು ವಿಸ್ತರಿಸಲು ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಬಹುದು ಅಂತ ತಿಳಿಸಿದೆ.
ಪರೀಕ್ಷೆಗಳನ್ನು ಮುಂದೂಡುವುದಕ್ಕೆ ಸಂಬಂಧಪಟ್ಟಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಸ್ಡಿಎಂಎ) ನಿರ್ಧಾರವು ಮೇಲುಗೈ ಸಾಧಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು. ಆದರೆ ಇದೇ ವೇಳೆ ಎಸ್ಡಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಉತ್ತೀರ್ಣರಾಗಲು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now