ಕನ್ನಡದುನಿಯಾ

1.6M Followers

'ನೇಮಕಾತಿ' ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಬಿಗ್ ಶಾಕ್

26 Jul 2020.06:57 AM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಗೊಂಡು ನೇಮಕಾತಿ ಪತ್ರದ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಶಾಕ್ ನೀಡಿದೆ.

ಹೊಸ ನೇಮಕಾತಿ ಆದೇಶ ನೀಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಈ ಕುರಿತಂತೆ ಎಲ್ಲಾ ಇಲಾಖೆಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ.

ಅಲ್ಲದೆ ಕೆ.ಪಿ.ಎಸ್.ಸಿ.ಗೂ ಈ ಕುರಿತು ನಿರ್ದೇಶನ ನೀಡಲಾಗಿದ್ದು, ಮುಂದಿನ ಆದೇಶ ನೀಡುವವರೆಗೆ ಯಾವುದೇ ಹೊಸ ಪ್ರಕ್ರಿಯೆ ನಡೆಸುವಂತಿಲ್ಲ ಹಾಗೂ ಈಗಾಗಲೇ ಪೂರ್ಣಗೊಂಡಿರುವ ಆಯ್ಕೆ ಪ್ರಕ್ರಿಯೆಗೆ ನೇಮಕದ ಆದೇಶ ನೀಡುವಂತಿಲ್ಲ ಎಂದು ತಿಳಿಸಲಾಗಿದೆ.

ಕೊರೊನಾದಿಂದ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags