Kannada News Now

1.8M Followers

ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು

28 Jul 2020.5:26 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಆಗಸ್ಟ್ ಇಲ್ಲವೇ ಸೆಪ್ಟಂಬರ್ ನಲ್ಲಿ ಶಾಲಾ-ಕಾಲೇಜು ತೆರೆಯಲಿವೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ಮತ್ತೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಆದ್ರೇ ಮಕ್ಕಳನ್ನು ಶಾಲೆಗೆ ಕಳಿಸದೇ ಕಲಿಕೆ ನೀಡಲಾಗುತ್ತದೆ. ಮಕ್ಕಳ ಕಲಿಕೆಗೆ ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ. ವಠಾರ, ಪಡಸಾಲೆ, ಮನೆ ಶಾಲೆ ಮೂಲಕ ಪಾಠ ಮಾಡಲಾಗುತ್ತದೆ. ಮಾಧ್ಯಮಗಳ ಮೂಲಕವೂ ಮಕ್ಕಳಿಗೆ ಪಾಠ ಕಲಿಸಿಕೊಡಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags