ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಇಂದು ಮಹತ್ವದ ನಿರ್ಧಾರ ಪ್ರಕಟವಾಗಲಿದೆ ಎನ್ನಲಾಗಿತ್ತು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸಭೆ ನಡೆಸಲು ಮುಂದಾಗಿದ್ದರು. ಆದರೆ ಇದೀಗ ತಾಂತ್ರಿಕ ಕಾರಣಗಳಿಂದಾಗಿ ಈ ಸಭೆ ಮುಂದೂಡಿಕೆಯಾಗಿದೆ.
ಕೊರೊನಾ ಆತಂಕದ ನಡುವೆ ಶಾಲೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಾಗಿತ್ತು. ಆದರೆ ನೆಟ್ ವರ್ಕ್ ಸಮಸ್ಯೆಯಿಂದಾಗಿ ಅಧಿಕಾರಿಗಳ ಸಂಪರ್ಕ ಸಾಧ್ಯವಾಗದೇ ಶಿಕ್ಷಣ ಇಲಾಖೆ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ.
ಹೀಗಾಗಿ ರಾಜ್ಯದಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ನಾಳೆ ಮಹತ್ವದ ನಿರ್ಧಾರ ಹೊರಬೀಳಲಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia