Kannada News Now

1.8M Followers

ʼಶಿಕ್ಷಕ ಹುದ್ದೆʼಯ ನಿರೀಕ್ಷಿತರಿಗೆ ಗುಡ್‌ ನ್ಯೂಸ್:‌ ʼಶಿಕ್ಷಣ ಸಚಿವʼರಿಂದ ಖಾಲಿ ಇರುವ ʼಹುದ್ದೆಗಳ ಭರ್ತಿʼಗೆ ಆದೇಶ..!

17 Nov 2020.4:36 PM

ಬೆಂಗಳೂರು: ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಶಿಕ್ಷಕ ಹುದ್ದೇಯ ನಿರೀಕ್ಷಿತರಿಗೆ ಫ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸಿಹಿ ಸುದ್ದಿ ನೀಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನ ಆದ್ಯತೆ ಮೇರೆಗೆ ಭರ್ತಿ ಮಾಡಲು ಆಧಿಕಾರಿಗಳಿಗೆ ಸೂಚನೆ ನೀಡಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಸಚಿವರು, 'ಇತ್ತೀಚೆಗಷ್ಟೇ ಇಲಾಖೆಯು ಶಿಕ್ಷಕರಿಗೆ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿದೆ. ವೃಂದ -ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಹೆಚ್ಚು ಖಾಲಿ ಹುದ್ದೆಗಳಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ' ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ' ಎಂದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags