Kannada News Now

1.8M Followers

BIG BREAKING NEWS : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಇಲ್ಲ - ಸಿಎಂ ಯಡಿಯೂರಪ್ಪ

29 Mar 2021.7:05 PM

ಬೆಂಗಳೂರು : ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆಯಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, Rallyಗೆ ಅವಕಾಶವಿಲ್ಲ. ವೈಜ್ಞಾನಿಕ ರೀತಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ. ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

BIG BREAKING : ಬೆಂಗಳೂರಿನಲ್ಲಿ 'ಕೊರೋನಾ ನಿಯಂತ್ರಣ'ಕ್ಕೆ ಟೀಂ ರಚಿಸಿ 'ರಾಜ್ಯ ಸರ್ಕಾರ'ದ ಆದೇಶ

ಕೊರೋನಾ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈಗಾಗಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.

ಏಪ್ರಿಲ್ 5ರಿಂದ ಕಾರ್ಯಾರಂಭ ಮಾಡುವಂತೆ ಸಜ್ಜುಗೊಳಿಸಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ತಂಡ ರಚಿಸಲಾಗಿದೆ. ಸಂಪರ್ಕಿತ ಪತ್ತೆಗೆ ಕಂದಾಯ, ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರ, ಗ್ರಾಮಾಂತರ ಸರ್ಕಾರ ಆಸ್ಪತ್ರೆಗಳಲ್ಲಿ 1630 ಬೆಡ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗಾಗಿ ಸಿದ್ಧರಿರುವಂತೆ ತಿಳಿಸಲಾಗಿದೆ.

BIG BREAKING NEWS : 'ಸಿಎಸ್' ಹೊರತಾಗಿ ಯಾವುದೇ ಸಚಿವರು, ಅಧಿಕಾರಿಗಳು 'ಕೊರೋನಾ ನಿಯಂತ್ರಣ' ಕುರಿತು ಹೇಳಿಕೆ, ಆದೇಶ ನೀಡುವಂತಿಲ್ಲ - ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

ಅನುದಾನಕ್ಕಾಗಿ 1,500ಕೋಟಿ ಮೀಸಲು ಇಡಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸೋದು, ಸಾಮಾಜಿಕ ಅಂತರ ಕಾಪಾಡಬೇಕು. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಗಳಲ್ಲಿ ಬೇರೆ ಬೇರೆ ರೀತಿಯ ಪಾರ್ಟಿ ಮಾಡೋದಕ್ಕೆ ಕಡಿವಾಣ ಹಾಕಲಾಗುತ್ತಿದೆ. ಮೈಸೂರು, ಕಲಬರ್ಗಿ, ದಕ್ಷಿಣ ಕನ್ನಡ, ಉಡುಪಿ 100 ಪಾಸಿಟಿವ್ ಕೇಸ್ ಬರ್ತಾ ಇದೆ. ಇದನ್ನು ತಡೆಯೋದಕ್ಕೆ ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ ಎಂದರು.

ರಾಜ್ಯ ಬಿಜೆಪಿ ಸರ್ಕಾರಕ್ಕೆ ದಿನ ಬೆಳಗಾದ್ರೇ ಸಾಕು, ಜನರು ಹಿಡಿ ಶಾಪ ಹಾಕ್ತಾ ಇದ್ದಾರೆ - ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆಯಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, Rallyಗೆ ಅವಕಾಶವಿಲ್ಲ. ವೈಜ್ಞಾನಿಕ ರೀತಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ. ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags