Kannadavahini

73k Followers

BREAKING: ಪರೀಕ್ಷೆ ಇಲ್ಲದೇ ಪಾಸ್ ಮಾಡಲ್ಲ: ಸಿಎಂ ಮಹತ್ವದ ಘೋಷಣೆ

29 Mar 2021.7:19 PM

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರಿಸುತ್ತಿದ್ದರೂ ಶಾಲಾ-ಕಾಲೇಜು ರದ್ದುಗೊಳಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯಲ್ಲಾದರೆ ಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಶಾಲೆಗಳಲ್ಲಾದರೆ ಶಿಸ್ತಿನಿಂದ ಇರುತ್ತಾರೆ ಎಂದರು.

ರಾಜ್ಯದ ಅಪಾರ್ಟ್ ಮೆಂಟ್ ಗಳಲ್ಲಿನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ವಿಶೇಷ ಅಂದರೆ ಅಪಾರ್ಟ್ ಮೆಂಟ್ ಗಳಿಗೆ ಹೋಲಿಸಿದರೆ ಸ್ಲಂಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಮಾಣ ಕಡಿಮೆ ಆಗಿದೆ ಎಂದು ಅವರು ಹೇಳಿದರು.

ಮಕ್ಕಳು ಮನೆಯಲ್ಲಿ ಇರುವುದಕ್ಕಿಂತ ಶಾಲೆಗೆ ಹೋಗುವುದು ಉತ್ತಮ. ಆದ್ದರಿಂದ ಇನ್ನೂ 15 ದಿನಗಳಲ್ಲಿ ಪರೀಕ್ಷೆ ಮಾಡಲಾಗುವುದು.

ಪರೀಕ್ಷೆ ಇಲ್ಲದೇ ಪಾಸ್ ಮಾಡುವ ಯೋಚನೆ ಸರಕಾರಕ್ಕಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannadavahini

#Hashtags