ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರಿಸುತ್ತಿದ್ದರೂ ಶಾಲಾ-ಕಾಲೇಜು ರದ್ದುಗೊಳಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯಲ್ಲಾದರೆ ಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಶಾಲೆಗಳಲ್ಲಾದರೆ ಶಿಸ್ತಿನಿಂದ ಇರುತ್ತಾರೆ ಎಂದರು.
ರಾಜ್ಯದ ಅಪಾರ್ಟ್ ಮೆಂಟ್ ಗಳಲ್ಲಿನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ವಿಶೇಷ ಅಂದರೆ ಅಪಾರ್ಟ್ ಮೆಂಟ್ ಗಳಿಗೆ ಹೋಲಿಸಿದರೆ ಸ್ಲಂಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಮಾಣ ಕಡಿಮೆ ಆಗಿದೆ ಎಂದು ಅವರು ಹೇಳಿದರು.
ಮಕ್ಕಳು ಮನೆಯಲ್ಲಿ ಇರುವುದಕ್ಕಿಂತ ಶಾಲೆಗೆ ಹೋಗುವುದು ಉತ್ತಮ. ಆದ್ದರಿಂದ ಇನ್ನೂ 15 ದಿನಗಳಲ್ಲಿ ಪರೀಕ್ಷೆ ಮಾಡಲಾಗುವುದು.
Disclaimer
This story is auto-aggregated by a computer program and has not been created or edited by Dailyhunt Publisher: Kannadavahini