ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ವೃದ್ಧಿಸಲು ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸಲು ಅನುಗುಣವಾಗುವಂತೆ ಉಲ್ಲೇಖ-01ರಂತೆ 2019-20ನೇ ಸಾಲಿನಿಂದ ಪ್ರಶ್ನೆ ಪತ್ರಿಕೆ ವಿನ್ಯಾಯಸವನ್ನು ಬದಲಾವಣೆ ಮಾಡಿದ್ದು, ಬಹು ಆಯ್ಕೆಯ ಪ್ರಶ್ನೆಗಳನ್ನು ಕಡಿಮೆ ಮಾಡಿ, ಅನ್ವಯ, ಕೌಶಲ್ಯ ಹಾಗೂ ವಿವರಣಾತ್ಮಕ ಉತ್ತರ ಬರೆಯುವ ಪ್ರಶ್ನೆಗಳಿಗೆ ಆದ್ಯತೆ ನೀಡಲಾಗಿದೆ.
BIG BREAKING : 'ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ'ಗೆ ಕೊರೋನಾ ನೆಗೆಟಿವ್, ಪತ್ನಿ ಚೆನ್ನಮ್ಮಗೆ ಪಾಸಿಟಿವ್
ಪ್ರಸ್ತುತ ಉಲ್ಲೇಖ-2ರಂತೆ 2020-21ನೇ ಸಾಲಿನಲ್ಲಿ ಕೋವಿಡ್-19ರ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೇರ ಬೋಧನೆ ಕಲಿಕೆಯು ದಿನಾಂಕ 01-01-2021ರಿಂದ ಪ್ರಾರಂಭವಾಗಿದ್ದು, ಮೌಲ್ಯಮಾಪನಕ್ಕೆ ಗುರುತಿಸಿರುವ ವಿಷಯಾಂಶಗಳ ಆಧಾರದ ಮೇಲೆ ಜೂನ್-2021ರ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ಕೆಳಕಂಡ ವಿವರಗಳೊಂದಿಗೆ ಅನುಬಂಧ-1ರಲ್ಲಿ ಲಗತ್ತಿಸಿದೆ ಎಂಬುದಾಗಿ ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now