Kannada News Now

1.8M Followers

ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ : ಏ.7 ಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ

01 Apr 2021.11:29 AM

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಬೇಡಿಕೆಗಳನ್ನು ಇನ್ನು ಈಡೇರಿಸದ ಹಿನ್ನೆಲೆಯಲ್ಲಿ ಇಂದಿನಿಂದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಚಳುವಳಿ ನಡೆಸಲಿದ್ದಾರೆ. ಏಪ್ರಿಲ್ 7 ರಂದು ಎಲ್ಲ ಸಾರಿಗೆ, ಬಸ್ ಗಳು ಸ್ತಬ್ದವಾಗಲಿದ್ದು, ಇಂದಿನಿಂದಲೇ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಮರ ಸಾರಿದ್ದಾರೆ.

ಬಿಬಿಎಂಪಿ ನೂತನ ಆಯುಕ್ತರಾಗಿ 'ಗೌರವ್ ಗುಪ್ತ' ಅಧಿಕಾರ ಸ್ವೀಕಾರ

ಇಂದು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸಾರಿಗೆ ಪ್ರತಿಭಟನೆ ನಡೆಸಲಿದ್ದು, ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚಳುವಳಿ ನಡೆಯಲಿದೆ.

'ಶಿಕ್ಷಕರ ಹುದ್ದೆ'ಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : '3,479 ಶಿಕ್ಷಕರ ಹುದ್ದೆ'ಯ ಭರ್ತಿಗೆ ಅರ್ಜಿ ಆಹ್ವಾನ

ಏಪ್ರಿಲ್ 2 ರಂದು ಬೆಂಗಳೂರಿನ ಸರ್ಕಲ್ ಗಳಲ್ಲಿ ಕುಟುಂಬದವರೊಂದಿಗೆ ಸೇರಿಕೊಂಡು ಬಜ್ಜಿ ಬೋಂಡ ಮಾರಾಟ ಮಾಡಲಿದ್ದಾರೆ.

ಏಪ್ರಿಲ್ 3 ರಂದು ನೌಕರರು ನಗರಗಳ ಸರ್ಕಲ್ ಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಭಿತ್ತಿಪತ್ರ ಪ್ರದರ್ಶನ ಮಾಡಲಿದ್ದಾರೆ. ಏಪ್ರಿಲ್ 4 ರಂದು ಸಾರ್ವಜನಿಕರಿಗೆ ಕರ ಹಂಚಿಕೆ ಮಾಡಲಿದ್ದಾರೆ. ಏಪ್ರಿಲ್ 5 ರಂದು ಧರಣಿ ಸತ್ಯಾಗ್ರಹ, ಏಪ್ರಿಲ್ 6 ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಏಪ್ರಿಲ್ 7 ರಂದು ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags