ಡಿಜಿಟಲ್ ಡೆಸ್ಕ್: ದೇಶದಲ್ಲಿ ಮತ್ತೆ ಕೊರೊನಾ ಉಲ್ಭಣವಾಗಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಎಲ್ಲಾ ಶಾಲೆಗಳು ಒಂದರಿಂದ ಎಂಟು ತರಗತಿಗಳನ್ನ ಏಪ್ರಿಲ್ 11ರವರೆಗೆ ಮುಚ್ಚಬೇಕು ಎಂದು ಆದೇಶಿಸಿದ್ದಾರೆ.
ಕೊರೊನಾ ಶಿಷ್ಟಾಚಾರವನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲ ಉನ್ನತ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದು, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ. ಇನ್ನು ಈ ಹಿಂದೆ ಉತ್ತರ ಪ್ರದೇಶದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಒಂದರಿಂದ ಎಂಟು ತರಗತಿಗಳನ್ನು ಏಪ್ರಿಲ್ 4ರವರೆಗೆ ಮುಚ್ಚಲು ಆದೇಶಿಸಲಾಗಿತ್ತು. ಈ ಅವಧಿಯಲ್ಲಿ ಪರೀಕ್ಷೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಟೀಕೆ ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ : ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಕರೆ
ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಕೋವಿಡ್-19 ಬಿಕ್ಕಟ್ಟಿನ ಸ್ಥಿತಿಗತಿಯನ್ನು ಪರಾಮರ್ಶಿಸಿದ್ದರು.
ಉತ್ತರ ಪ್ರದೇಶದಲ್ಲಿ ಗುರುವಾರ 24 ಗಂಟೆಗಳಲ್ಲಿ 2,600 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಒಂದೇ ದಿನದಲ್ಲಿ 1,24,135 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ತಿಳಿಸಿದ್ದಾರೆ. ರಾಜ್ಯದಲ್ಲಿ 11,918 ಸಕ್ರಿಯ ಕರೋನಾ ಪ್ರಕರಣಗಳಲ್ಲಿ 6,722 ಮಂದಿ ಮನೆ ಪ್ರತ್ಯೇಕತೆ ಹೊಂದಿದ್ದರೆ, 287 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ದೇಶದಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಲ್ಲೆಲ್ಲಿ, ಎಷ್ಟಿದೆ?
Disclaimer
This story is auto-aggregated by a computer program and has not been created or edited by Dailyhunt Publisher: Kannada News Now