ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಬಗೆಹರಿಯದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ.
ಕಡ್ಡಾಯ ಮತ್ತು ಹೆಚ್ಚುವರಿ ವ್ಯಾಪ್ತಿಗೆ ಬರುವ 3000 ಶಿಕ್ಷಕರಿಗೆ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರು ನೀಡಿದ ಭರವಸೆಯನ್ನು ಈಡೇರಿಸುವ ಉದ್ದೇಶದಿಂದ ಸುಗ್ರಿವಾಜ್ಞೆ ಜಾರಿಗೊಳಿಸಲು ಮುಂದಿನ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.
ವರ್ಗಾವಣೆ ಕೋರಿ 72 ಸಾವಿರ ಅರ್ಜಿಗಳು ಬಂದಿವೆ. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯ ವರ್ಗಾವಣೆಯ ಕಾಯ್ದೆ ಪಾಲಿಸುವಂತೆ ಸೂಚನೆ ನೀಡಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia