ಬಿಸಿ ಸುದ್ದಿ

169k Followers

ಇಂದು 1-9 ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಸಭೆ..!

05 Apr 2021.07:11 AM

ಬೆಂಗಳೂರು : ಇಂದು ಬೆಳಗ್ಗೆ 10.30 ಕ್ಕೆ 1-9 ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧಿಸಿದಂತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು, ವಿವಿಧ ಖಾಸಗಿ ಶಾಲಾ ಸಂಘಟನೆಗಳು ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

ಏಕೆಂದರೆ ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬದಲು ಮೌಲ್ಯಾಂಕನ ನಡೆಸುವ ಬಗ್ಗೆ ಇಂದು ಶಿಕ್ಷಣ ತಜ್ಞರು ಹಾಗೂ ಖಾಸಗಿ ಶಾಲಾ ಸಂಘಟನೆಗಳ ಜೊತೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಸಭೆ ನಡೆಸಲಿದ್ದಾರೆ.

ಜೊತೆಗೆ 2021-22 ನೇ ಸಾಲಿನ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪುಸ್ತಕ ಖರೀದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೋರಿಕೆಯಂತೆ ಪಠ್ಯ ಪುಸ್ತಕ ವಿತರಣೆ ಸೇರಿ ಪೂರಕ ವಿಷಯಗಳು ಹಾಗೂ ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆ ಸಂಬಂಧವೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags