ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯುತ್ತೆ. ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರಿಯುತ್ತೆ. ಮುಷ್ಕರದ ವೇಳೆ ಕೊರೊನಾ ನಿಯಮ ಸಹ ಉಲ್ಲಂಘಿಸಿಲ್ಲ. ಇದೇ ರೀತಿ, ನಾಳೆಯೂ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸಲಾಗುತ್ತೆ ಎಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಕೊರೊನಾ ಆರ್ಥಿಕ ಸಂಕಷ್ಟ ಎಂದು ರಾಜ್ಯ ಸರ್ಕಾರ ಹೇಳುತ್ತೆ. ಕೊರೊನಾ ನಡುವೆಯೂ ಮಠ, ಮಂದಿರಕ್ಕೆ ಹಣ ನೀಡಿಲ್ಲವೇ? ಅರ್ಧ ಸಂಬಳ ನೀಡಿ ಕೆಲಸ ಮಾಡಿಸಿಕೊಳ್ಳುವುದು ಸರಿಯೇ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನಾಲ್ಕು ನಿಗಮದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ದಿನ ಏನೇನಾಯ್ತು? ಬೆಳಗ್ಗಿನಿಂದ ಇಲ್ಲಿಯವರೆಗಿನ ಘಟನಾವಳಿಗಳ ವಿವರಗಳು ಇಲ್ಲಿದೆ.
The post Karnataka Transport Workers Strike: ಸಾರಿಗೆ ನೌಕರರ ಮುಷ್ಕರದ ಈ ದಿನ ಏನೇನಾಯ್ತು? appeared first on TV9 Kannada.
Disclaimer
This story is auto-aggregated by a computer program and has not been created or edited by Dailyhunt Publisher: TV9 Kannada