ಬೆಂಗಳೂರು : ರಾಜ್ಯ ಸರ್ಕಾರದಿಂದ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ನಿರ್ಧರಿಸಿದ್ದಾಗಿ ತಿಳಿದು ಬಂದಿತ್ತು. ಈ ಮೂಲಕ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ ಕೂಡ ನೀಡಿತ್ತು. ಆದ್ರೇ ಮಾರ್ಚ್ ತಿಂಗಳ ಸಂಬಂಳ ರಿಲೀಸ್ ಆಗುತ್ತೆ, ಆದ್ರೇ ಸ್ವಲ್ಪ ಲೇಟ್ ಆಗುತ್ತದೆ ಎಂಬುದಾಗಿ ಕೆಎಸ್ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ ತಿಳಿಸುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್ ಹಣಕಾಸು ವರ್ಷದ ಅಂತ್ಯದ ತಿಂಗಳಾಗಿದೆ. ಇದರಿಂದಾಗಿ ಸಾರಿಗೆ ನೌಕರರ ಸಂಬಂಳ ವಿಳಂಬವಾಗುವ ಸಾಧ್ಯತೆ ಇದೆ.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಜಾರಿಗೆ ತರೋದಕ್ಕೆ ಸಾಧ್ಯವಿಲ್ಲ. ಇದನ್ನು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟ ಪಡಿಸಿದೆ. ಆ ಬಗ್ಗೆ ನಾನು ಮತ್ತೆ ಪ್ರತಿಕ್ರಿಯಿಸಲ್ಲ. ಮುಷ್ಕರ ನಿರತ ನೌಕರರಿಗೆ ಆರ್ಥಿಕ ಪರಿಸ್ಥಿತಿಯ ಮನವರಿಕೆ ಮಾಡಲಾಗುವುದು ಎಂದರು.
ಮನೆ ವಿಚಾರಕ್ಕೆ ದಯಾದಿಗಳ ನಡುವೆ ಗಲಾಟೆ : ಹೊಡೆದಾಟದಲ್ಲಿ ತಂದೆ-ಮಗ ಸಾವು
Disclaimer
This story is auto-aggregated by a computer program and has not been created or edited by Dailyhunt Publisher: Kannada News Now