ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ' ರಾಜ್ಯದಲ್ಲಿ ಮೇ 24 ರಿಂದ ಪಿಯುಸಿ ಪರೀಕ್ಷೆಗಳು, ಜೂನ್ 20 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗುತ್ತದೆ. ಕೊರೊನಾ ಏಪ್ರಿಲ್ ನಲ್ಲಿ ಇನ್ನೂ ಕೂಡ ಹೆಚ್ಚಾಗುತ್ತದೆ, ಮೇ ನಲ್ಲಿ ಕಡಿಮೆಯಾಗುತ್ತದೆ ಎಂಬ ವರದಿಗಳಿದೆ. ಕೊರೊನಾ ಜೊತೆ ಬದುಕು ಅನಿವಾರ್ಯವಾಗಿದೆ. ಕೊರೊನಾ ನಡುವೆ ಪರೀಕ್ಷೆ ನಡೆಸುವುದು ನಮ್ಮ ಕರ್ತವ್ಯ. ಕೊರೊನಾ ನಡುವೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಜವಾದ ಕೊರೊನಾ ವಾರಿಯರ್ಸ್ ಎಂದು ಹೇಳಿದ್ದಾರೆ.
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,75,798 ಜನ ವಿದ್ಯಾರ್ಥಿಗಳು ನೊಂದಣೀ ಮಾಡಿಕೊಂಡಿದ್ದಾರೆ. ಪಿಯುಸಿ ಗೆ 7,1,651 ಜನ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.
BREAKING : ಉತ್ತರಪ್ರದೇಶದಲ್ಲಿ ಕಂದಕ್ಕೆ ಉರುಳಿದ ಟ್ರಕ್ : 10 ಜನರು ಸಾವು, 30 ಮಂದಿಗೆ ಗಾಯ
ಎಸ್ಮಾ ಜಾರಿ ಮಾಡೋಲ್ಲ.. 4 ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರುತ್ತೆ: ಲಕ್ಷ್ಮಣ ಸವದಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now