Kannada News Now

1.8M Followers

'CBSE' ಪರೀಕ್ಷೆ ರದ್ದು ಮಾಡುವಂತೆ ಕೋರಿ ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಿಯಾಂಕಾ ಗಾಂಧಿ ಪತ್ರ

11 Apr 2021.7:17 PM

ನವದೆಹಲಿ : ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ 'CBSE' ಪರೀಕ್ಷೆ ಗಳನ್ನು ರದ್ದು ಮಾಡುವಂತೆ ಕೋರಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸುವುದು ಅಸಾಧ್ಯದ ಕೆಲಸವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಪ್ರಿಯಾಂಕಾ ಗಾಂಧಿ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕಿನ ನಡುವೆ ಪರೀಕ್ಷೆ ನಡೆದರೆ ಎಕ್ಸಾಂ ಸೆಂಟರ್ ಗಳು ಕೊರೊನಾ ಹಾಟ್ ಸ್ಪಾಟ್ ಆಗಿ ಬದಲಾದರೆ,ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗಲಿದ್ದಾರೆ.

ಇದರ ಹೊಣೆಯನ್ನು ಸಿಬಿಇಎಸ್‌ಇ ಬೋರ್ಡ್ ಹೊರಬೇಕಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags