ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ತುರ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆಯುತ್ತಿದೆ. ಇಂತಹ ಸಭೆಯಲ್ಲಿ ರಾತ್ರಿ ಕರ್ಪ್ಯೂ ಬಳಿಕ, ರಾಜ್ಯದಲ್ಲಿ ಮತ್ತೆ 10 ದಿನ ಲಾಕ್ ಡೌನ್ ಘೋಷಣೆ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಮತ್ತೆ 10 ದಿನ ಲಾಕ್ ಡೌನ್ ಆಗಲಿದ್ಯಾ ಎನ್ನುವ ಭೀತಿ ಶುರುವಾಗಿದೆ.
ಇಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ತುರ್ತು ಸಭೆ ನಡೆಯುತ್ತಿದೆ. ಇಂತಹ ಸಭೆಯಲ್ಲಿ ಕೊರೋನಾ ನಿಯಂತ್ರಣ ಕ್ರಮಗಳ ಕುರಿತಂತೆ ಬಿಸಿ ಬಿಸಿ ಚರ್ಚೆ ಕೂಡ ನಡೆಯುತ್ತಿದೆ ಎನ್ನಲಾಗಿದೆ.
ಹೀಗೆ ನಡೆಯುತ್ತಿರುವಂತ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಆರೋಗ್ಯ ಸಚಿವರಿಗೆ ಕೊರೋನಾ ನೈಟ್ ಕರ್ಪ್ಯೂ ಬಳಿಕ, ರಾಜ್ಯದಲ್ಲಿ ಮತ್ತೆ 10 ದಿನ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವಂತೆ ಸಲಹೆ ಮಾಡಿದೆ ಎನ್ನಲಾಗಿದೆ. ಆದ್ರೇ.. ಲಾಕ್ ಡೌನ್ ಹೊರತಾಗಿ ಕೊರೋನಾ ನಿಯಂತ್ರಣಕ್ಕಾಗಿ ಸಲಹೆ ಮಾಡುವಂತೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now