ಬೆಂಗಳೂರು: ಸಿಬಿಎಸ್ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನ ರದ್ದುಪಡಿಸಲಾಗುತ್ತಾ ಅನ್ನೋ ಪ್ರಶ್ನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, 'ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನ ರದ್ದು ಪಡಿಸುವ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ' ಎಂದಿದ್ದಾರೆ.
ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವರು, 'ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 21ರಿಂದ ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ, ಪರೀಕ್ಷೆಗಳನ್ನ ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತು ಎದ್ದಿದ್ದ ಊಹಾಪೋಹಗಳಿಗೆ ಶಿಕ್ಷಣ ಸಚಿವರು ತೆರೆ ಎಳಿದಿದ್ದಾರೆ.
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar, Minister &dhndash; Govt of Karnataka (@nimmasuresh) April 14, 2021
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
— S.Suresh Kumar, Minister &dhndash; Govt of Karnataka (@nimmasuresh) April 14, 2021
Disclaimer
This story is auto-aggregated by a computer program and has not been created or edited by Dailyhunt Publisher: Kannada News Now