Kannada News Now

1.8M Followers

ಲಾಕ್ ಡೌನ್ ವೇಳೆ ಕಂಪನಿ, ಕಾರ್ಖಾನೆಗಳು ಉದ್ಯೋಗ ಕಡಿತ ಮಾಡದಂತೆ ಸೂಚಿಸಿ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

29 Apr 2021.05:29 AM

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ 14 ದಿನಗಳ ಕೊರೊನಾ ಕರ್ಪ್ಯೂ ವಿಧಿಸಿದೆ. ಇಂತಹ ಸಂದರ್ಭದಲ್ಲಿ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳು ತಮ್ಮ ನೌಕರರನ್ನು ಕೆಲಸದಿಂದ ವಜಾಗೊಳಿಸಬಾರದು ಎಂದು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೊರೊನಾ ವೈರಸ್‌ ಲಾಕ್‌ಡೌನ್‌ ಕಾರಣದಿಂದಾಗಿ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಹಲವು ಭೂ ಮಾಲೀಕರು,ಮನೆ, ವಸತಿ, ಗೃಹ, ಪಿಜಿ, ಅಂಗಡಿ ಮಾಲೀಕರು ಬಾಡಿಗೆ ಮತ್ತು ಭೋಗ್ಯದ ಆಧಾರದ ಮೇಲೆ ನೀಡಿರುವ ಸ್ಥಳಗಳು, ಗೃಹಗಳನ್ನು ಬಾಡಿಗಾರರಿಂದ ಬಲವಂತವಾಗಿ ತೆರವುಗೊಳಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಹಾಗೂ ವಿವಿಧ ಉದ್ಯಮಗಳು ಸಂಪೂರ್ಣ ಸ್ಥಗಿತಗೊಂಡಿವೆ.

ಇದರಿಂದ ಆರ್ಥಿಕ ನಷ್ಟದ ಕಾರಣ ನೀಡಿ ನೌಕರರಿಗೆ ವೇತನ ಕಡಿತ ಹಾಗೂ ಉದ್ಯೋಗದಿಂದ ವಜಾಗೊಳಿಸುವ ನಿರ್ಧಾರ ಕೈಗೊಳ್ಳಬಾರದು, ಜೊತೆಗೆ ಮನೆ ಮಾಲೀಕರು ಮನೆ ಒತ್ತಾಯಪೂರ್ವಕವಾಗಿ ಮನೆ ಖಾಲಿಮಾಡುವಂತೆ ಸೂಚಿಸಬಾರದು ಎಂದು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.





Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags