ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಇಂದು 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಣಾಂಕ ಆಧಾರದ ಮೇಲೆ ಹಿಂದಿನ ದಾಖಲೆ ಆಧರಿಸಿ, ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಆದೇಶಿಸಿದೆ. ಇದರ ಜೊತೆಗೆ ಸುತ್ತೋಲೆಯಲ್ಲಿ ಬೇಸಿಗೆ ರಜೆಯ ವೇಳಾಪಟ್ಟಿ ಕೂಡ ಘೋಷಿಸಿದ್ದಾರೆ. ಈ ಸುತ್ತೋಲೆಯಂತೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜೂನ್ 15ಕ್ಕೆ ಬೇಸಿಗೆ ಮುಗಿದ್ರೇ.. ಪ್ರೌಢ ಶಾಲಾ ಶಿಕ್ಷಕರಿಗೆ ಜೂನ್ 15ರಿಂದ ಬೇಸಿಗೆ ರಜೆ ಪ್ರಾರಂಭಗೊಂಡಿದೆ. ಇದು ಅವೈಜ್ಞಾನಿಕತೆಯಿಂದ ಕೂಡಿದ ವೇಳಾಪಟ್ಟಿಯಾಗಿದೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಅನೇಕ ಶಿಕ್ಷಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದಾಗಿ ಈವರೆಗೆ 1 ರಿಂದ 9ನೇ ತರಗತಿ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಸಿತಗೊಳ್ಳುವುದು ಬೇಡ ಎಂಬ ಕಾರಣದಿಂದಾಗಿ ಆರಂಭಗೊಂಡ ವಿದ್ಯಾಗಮ ಕಾರ್ಯಕ್ರಮದಿಂದಾಗಿಯೂ ಕೊರೋನಾ ಸೋಂಕು ವಿದ್ಯಾರ್ಥಿಗಳಿಗೆ ತಗುಲಿತ್ತು.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು(ಪ್ರೌಢ ಶಿಕ್ಷಣ) ಸುತ್ತೋಲೆ ಹೊರಡಿಸಿದ್ದು, ಕೊರೋನಾ ಸೋಂಕಿನ ಹಿನ್ನಲೆಯಲ್ಲಿ, ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಈ ಕೆಳಕಂಡಂತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ಶಿಕ್ಷಕರಿಗೆ ಬೇಸಿಗೆ ರಜೆಯ ಪಟ್ಟಿಯನ್ನು ಪ್ರಕಟಿಸಿದ್ದಾರೆ.
2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ
ಪ್ರಾಥಮಿಕ ಶಾಲೆಗಳಿಗೆ
ಪ್ರೌಢ ಶಾಲೆಗಳಿಗೆ
ಮೇಲ್ಕಂಡ ವೇಳಾ ಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್-19ರ ಹಿನ್ನಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಯನ್ನು ಮತ್ತು ನಿರ್ದೇಶನಗಳನ್ನು ಪಾಲಿಸಿವುದು ಕಡ್ಡಾಯವಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಆದ್ರೇ.. ಶಿಕ್ಷಣ ಇಲಾಖೆ ಮತ್ತೊಂದು ಎಡವಟ್ಟು. ಬೇಸಿಗೆ ರಜೆ ನೀಡುವ ವಿಷಯದಲ್ಲಿ ಅವೈಜ್ಞಾನಿಕ ನಿರ್ಧಾರವಾಗಿದೆ.. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜೂನ್ 15 ಕ್ಕೆ ಬೇಸಿಗೆ ಮುಗಿದರೆ, ಪ್ರೌಢಶಾಲಾ ಶಿಕ್ಷಕರಿಗೆ ಜೂನ್ 15 ರಿಂದ ಬೇಸಿಗೆ ರಜೆ ಪ್ರಾರಂಭಗೊಂಡಿರುವುದು ಎಷ್ಟು ಸರಿ.? ಪ್ರಾಥಮಿಕ ಹಾಗೂ ಪ್ರೌಢಶಾಲೆ ಎಂದು ಸೂರ್ಯನೂ 'ಬೇಸಿಗೆ'ಯ ತಾರತಮ್ಯ ಮಾಡುವನೇ? ಎಂಬುದಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಶಿಕ್ಷಕರು, ಶಿಕ್ಷಣ ಸಚಿವರ ಕಾಲೆಳೆದಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now