ಬೆಂಗಳೂರು : ರಾಜ್ಯ ಸರ್ಕಾರಿ ನೌಖರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಪ್ಯಾಕೇಜ್ ದರ ಪ್ರಕಟಿಸಿ ಆದೇಶ ಮಾಡಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಸಾಮಾನ್ಯ ವಾರ್ಡ್ ಗೆ ದಿನಕ್ಕೆ 10 ಸಾವಿರ ರೂ. ಹೆಚ್ಚು ಅವಲಂಬಿತ ಘಟಕಕ್ಕೆ 12 ಸಾವಿರ ರೂ. ವೆಂಟಿಲೇಟರ್ ರಹಿತ ಐಸಿಯು ವಾರ್ಡ್ ಗೆ 15 ಸಾವಿರ ರೂ. ವೆಂಟಿಲೇಟರ್ ಸಹಿತ ಐಸಿಯು ವಾರ್ಡ್ ಗೆ 25 ಸಾವಿರ ರೂ. ನಿಗದಿ ಮಾಡಿದೆ.
ಇನ್ನು ಪ್ಯಾಕೇಜ್ ದರದಲ್ಲಿ ಸರ್ಕಾರಿ ನೌಕರರು, ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸಾ ವೆಚಚ್ಚ ಮರುಪಾವತಿಸಲು ಸೂಚಿಸಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now