ವರದಿ : ವಸಂತ ಬಿ ಈಶ್ವರಗೆರೆ ಜೊತೆಗೆ, ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕರ್ಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿತ್ತು. ಈ ವೇಳೆಯಲ್ಲಿ ಅಗತ್ಯಸೇವೆ ಒದಗಿಸುವಂತ ಇಲಾಖೆ ಜೊತೆಗೆ, ಇತರೆ ಸೇವೆ ಒದಗಿಸುವಂತ ಇಲಾಖೆಗಳಿಗೂ ಅವಕಾಶ ನೀಡಲಾಗಿತ್ತು. ಆದ್ರೇ.. ಇದೀಗ ಕೊರೋನಾ ನೈಟ್ ಕರ್ಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಇಂತಹ ಮಾರ್ಗಸೂಚಿಯಲ್ಲಿ ಅಗತ್ಯ ಸೇವೆ ಹೊರತಾಗಿ, ಎಲ್ಲಾ ಶಾಪ್ ಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ಮಾರ್ಗಸೂಚಿ ಕ್ರಮದಂತೆ ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ಇದಲ್ಲದೇ ಅಗತ್ಯ ಸೇವೆ ಒದಗಿಸುವಂತ ಸೇವೆಯ ಶಾಪ್ ಗಳು ಹೊರತಾಗಿ, ರಾಜ್ಯಾಧ್ಯಂತ ಇತರೆ ಶಾಪ್ ಗಳನ್ನು ಬಂದ್ ಮಾಡುವಂತೆ ಇದೀಗ ನೂತನ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ನಿನ್ನೆಯಿಂದಲೇ ಅನ್ವಯವಾಗುವಂತೆ ಪರಿಷ್ಕೃತ ಮಾರ್ಗಸೂಚಿ ಆದೇಶದಲ್ಲಿ ಅಗತ್ಯಸೇವೆ ಹೊರತಾಗಿ ಉಳಿದ ಎಲ್ಲಾ ಶಾಪ್ ಬಂದ್ ಗೆ ಸೂಚಿಸಲಾಗಿದೆ. ಹೀಗಾಗಿ ಪೊಲೀಸರು ಫೀಲ್ಡಿಗೆ ಇಳಿದಿದ್ದು, ಅಗತ್ಯ ಸೇವೆ ಒದಗಿಸುವಂತೆ ಮೆಡಿಕಲ್, ಹಾಲು, ಇ-ಕಾಮರ್ಸ್ ಸೇರಿದಂತೆ ಇತರೆ ಶಾಪ್ ಹೊರತಾಗಿ, ಇತರೆ ಅಂಗಡಿ ಮುಂಗಟ್ಟುಗಳನ್ನು ಕ್ಲೋಸ್ ಮಾಡುತ್ತಿದ್ದಾರೆ.
ಯಾವುದಕ್ಕೆ ಅನುಮತಿ
ಯಾವುದಕ್ಕೆ ನಿರ್ಬಂಧ
ಹೀಗಿದೆ ರಾಜ್ಯ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿರುವಂತ ಪರಿಷ್ಕೃತ ಮಾರ್ಗಸೂಚಿ ಕ್ರಮಗಳು
Disclaimer
This story is auto-aggregated by a computer program and has not been created or edited by Dailyhunt Publisher: Kannada News Now