ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಅತ್ಯಂತ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ. ಇದರ ಮುಂದುವರೆದ ಭಾಗವಾಗಿ ವಾರಪೂರ್ತಿ ಕರ್ಫ್ಯೂ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು ಈ ಬಗ್ಗೆ ಇಂದು ಮಹತ್ವದ ತೀರ್ಮಾನ ಹೊರಬೀಳಲಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುವ ಮಟ್ಟಕ್ಕೆ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ಅಭಿಪ್ರಾಯ ತಜ್ಞರ ವಲಯದಲ್ಲಿ ಕೇಳಿಬರುತ್ತಿದೆ.
ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಮೇ 4ರ ತನಕ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ರಾಜ್ಯ ಸರ್ಕಾರದ ಬಹುಪಾಲು ಸಚಿವರು ಲಾಕ್ಡೌನ್ ಬೇಡವೆಂದೇ ಬಾಯಿಮಾತಿಗೆ ಹೇಳುತ್ತಿರುವರಾದರೂ ಪರಿಸ್ಥಿತಿಯನ್ನು ನೋಡಿದರೆ ಕಠಿಣ ಕ್ರಮ ಜಾರಿಯಾಗುವುದು ಖಚಿತ ಎಂದು ಸರ್ಕಾರದ ಮೂಲಗಳು ಹೇಳುತ್ತಿವೆ. ಜತೆಗೆ, ಇಂದಿನ ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆಯೂ ಚರ್ಚೆ ನಡೆಯಲಿದ್ದು, ಉಚಿತ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಾತುಕತೆ ಆಗಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ಆಗದು; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್
ಕೇಂದ್ರದಿಂದ ಆಮ್ಲಜನಕ ಬರದಿದ್ದರೆ ಕೆಲವು ಆಸ್ಪತ್ರೆ ಮುಚ್ಚಬೇಕಾದ ಪರಿಸ್ಥಿತಿ ಬರಬಹುದು; ಸಿಎಂ ಬಿಎಸ್ ಯಡಿಯೂರಪ್ಪ
The post Karnataka Lockdown: ಕರ್ನಾಟಕದಲ್ಲಿ ವಾರದ ದಿನಗಳಿಗೂ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಚಿಂತನೆ; ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ appeared first on TV9 Kannada.
Disclaimer
This story is auto-aggregated by a computer program and has not been created or edited by Dailyhunt Publisher: TV9 Kannada