Kannada News Now

1.8M Followers

BIG BREAKING NEWS : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ಲಾಕ್‍ಡೌನ್ - ಸಿಎಂ ಯಡಿಯೂರಪ್ಪ ಘೋಷಣೆ

21 May 2021.7:12 PM

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.

ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಂದಹಾಗೇ, ರಾಜ್ಯದಲ್ಲಿ ಇಂದು ಖುಷಿಯ ಸಂಗತಿ ಎನ್ನುವಂತೆ 52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತರಾದಂತ 353 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 9,591 ಜನರು ಸೇರಿದಂತೆ ರಾಜ್ಯಾಧ್ಯಂತ 32,218 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 23,67,742ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

ಇನ್ನೂ ಸಿಹಿ ಸುದ್ದಿ ಎನ್ನುವಂತೆ ರಾಜ್ಯಾಧ್ಯಂತ ಇಂದು ಕೊರೋನಾ ಸೋಂಕಿತರಾದಂತ 52,581 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಬೆಂಗಳೂರು ನಗರದಲ್ಲಿ 2,89,131 ಸಕ್ರೀಯ ಸೋಂಕಿತರು ಸೇರಿದಂತೆ ರಾಜ್ಯಧ್ಯಾಂತ 5,14,238 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇಂದು ಬಳ್ಳಾರಿಯಲ್ಲಿ 23, ಬೆಂಗಳೂರು ಗ್ರಾಮಾಂತರದಲ್ಲಿ 30, ಬೆಂಗಳೂರು ನಗರದಲ್ಲಿ 129, ಶಿವಮೊಗ್ಗದಲ್ಲಿ 20 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಂಕಿತರಾದಂತ 353 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 24,207ಕ್ಕೆ ಏರಿಕೆಯಾಗಿದೆ.

ವರದಿ : ವಸಂತ ಬಿ ಈಶ್ವರಗೆರೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags