ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರಿಸಲಿದ್ದು, ರಾಜ್ಯದ ಜನ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಕಠಿಣ ನಿರ್ಬಂಧಗಳನ್ನು ಮುಂದುವರೆಸಲಾಗಿದೆ. ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia