Kannada News Now

1.8M Followers

'ಅನುದಾನ ರಹಿತ ಶಾಲಾ ಶಿಕ್ಷಕ'ರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ '5 ಸಾವಿರ ಪರಿಹಾರ ಧನ' ಘೋಷಣೆ

03 Jun 2021.5:44 PM

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಜೂನ್ 7ರ ಲಾಕ್ ಡೌನ್ ಅನ್ನು ಮತ್ತೆ, ಜೂನ್.14ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿದ್ದಾರೆ. ಜೊತೆ ಜೊತೆಗೆ ಮತ್ತೆ 2ನೇ ಹಂತದ ವಿಶೇಷ ಆರ್ಥಿಕ ಪ್ಯಾಕೇಜ್ ಆಗಿ 500 ಕೋಟಿ ಘೋಷಿಸಿದ್ದಾರೆ. ಇದರಲ್ಲಿ ರಾಜ್ಯದ ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಸಿಹಿ ಸುದ್ದಿ ನೀಡಿದ್ದು, ರೂ.5 ಸಾವಿರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಜಾರಿಯಲ್ಲಿರುವಂತ ಜೂನ್.7ರವರೆಗಿನ ಲಾಕ್ ಡೌನ್ ಅನ್ನು ಜೂನ್.14ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಬಾರಿ 2ನೇ ಹಂತದಲ್ಲಿ 500 ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸುತ್ತಿರುವುದಾಗಿ ತಿಳಿಸಿದರು.

ಮುಜುರಾಯಿ ದೇವಸ್ಥಾನದ ಅರ್ಚಕರು, ಅಡುಗೆ ಸಹಾಯಕರಿಗೆ ತಲಾ ಮೂರು ಸಾವಿರ ನೀಡಲು ನಿರ್ಧಾರ ಮಾಡಲಾಗಿದೆ. ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42,574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ 2 ಸಾವಿರ ನೀಡಲಾಗುತ್ತದೆ ಎಂದರು.

ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಜೂನ್, ಜುಲೈ ಮಾಹೆಯಲ್ಲಿ ಹಾಲಿನ ಪ್ಯಾಕೇಟ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಂಕಷ್ಟದಲ್ಲಿರುವಂತ ಅನುಧಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ ನೀಡಲಾಗುತ್ತದೆ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ವಕೀಲರಿಗೂ ಲಾಕ್ ಡೌನ್ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ ಎಂದರು.

ವರದಿ : ವಸಂತ ಬಿ ಈಶ್ವರಗೆರೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags