ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದಾಗಿ ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ, ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ ಮಾಡಿದೆ. ಆಗಸ್ಟ್ 28, 29ರಂದು ನಡೆಸಲು ನಿರ್ಧರಿಸಿದೆ.
ಈ ಕುರಿತಂತೆ ಇಂದು ಸಿಇಟಿ ವಿಚಾರವಾಗಿ ನಡೆದಂತ ಸಭೆಯ ನಂತ್ರ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸಿಇಟಿ ಸಭೆ ವಿಚಾರದಲ್ಲಿ ಸಭೆಯನ್ನು ಕರೆಯಲಾಗಿತ್ತು.
ಪಿಯುಸಿ ಮಾರ್ಕ್ ಅನ್ನು ಈ ವರ್ಷ ತೆಗೆದುಕೊಳ್ಳೋದಿಲ್ಲ. ಈ ವರ್ಷ ಸಿಇಟಿ ಪರೀಕ್ಷೆಯ ಅಂಕವನ್ನು ಪರಿಗಣಿಸಿಯೇ RANK ನೀಡುವಂತ ಕಾರ್ಯವನ್ನು ಮಾಡಲಾಗುತ್ತದೆ. ಅದೇ ರೀತಿ ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಮೊದಲ ದಿನ ಮ್ಯಾಥಮೇಟಿಕ್ಸ್ ಹಾಗೂ ಬಯೋಲಜಿ ಪರೀಕ್ಷ ನಡೆಯಲಿದೆ. ಎರಡನೇ ದಿನ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ. ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ. ಜೂನ್.15ರಿಂದ ಸಿಇಟಿ ಪರೀಕ್ಷೆ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.
ಸಿಇಟಿನಲ್ಲಿ ನೀಟ್ ತರ ಮಿನಿಮಮ್ ಮಾರ್ಕ್ ಪರಿಗಣಿಸೋ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂಕಿ ಅಂಶಗಳನ್ನು ನೋಡಿ, ಯಾವುದು ಸೂಕ್ತ ಎನ್ನುವ ಬಗ್ಗೆ ಇದೆ. ಈ ದಿಕ್ಕಿನಲ್ಲಿ ಕೂಡ ಚರ್ಚೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದರು.
ವರದಿ : ವಸಂತ ಬಿ ಈಶ್ವರಗೆರೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now