ರಾಮನಗರ: ರಾಜ್ಯದಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ರಾಮನಗರ ತಾಲೂಕಿನ ಬಿಡದಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಯೋಜನೆಗಳನ್ನು ಸದ್ಯಕ್ಕೆ ನಿಲ್ಲಿಸಲಿ. ರೇಷನ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಲಿ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಲಸಿಕೆಯ ವಿಚಾರದಲ್ಲಿ ದಂಧೆ ನಡೆಸುತ್ತಿದೆ. ಖಾಸಗಿ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ದಂಧೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia