Zee News ಕನ್ನಡ

352k Followers

CBSE 12th Exam 2021: ಪರೀಕ್ಷೆ ಇಲ್ಲದೆಯೇ ವಿದ್ಯಾರ್ಥಿಗಳು ಪಾಸ್, Result ಬಗ್ಗೆ ಅಸಮಾಧಾನ ಇರುವವರಿಗೆ ಇದೇ ಆಯ್ಕೆ

02 Jun 2021.11:26 AM

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ತರಂಗದ ಅಬ್ಬರ ಹಾಗೂ ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) 12 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಮಂಗಳವಾರ ನಿರ್ಧರಿಸಿದೆ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ:
12 ನೇ ತರಗತಿ ಫಲಿತಾಂಶವನ್ನು (CBSE 12th Exam Result) ನಿಗದಿತ ಸಮಯದೊಳಗೆ ಮತ್ತು ತಾರ್ಕಿಕ ಆಧಾರದ ಮೇಲೆ ತಯಾರಿಸಲಾಗುವುದು. ಫಲಿತಾಂಶಕ್ಕಾಗಿ ಶಿಕ್ಷಣ ಸಚಿವಾಲಯವು ಹಲವು ಆಯ್ಕೆಗಳನ್ನು ಸಿದ್ಧಪಡಿಸಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಇದರಲ್ಲಿ, ಮೊದಲನೆಯದು - ಹಿಂದಿನ ತರಗತಿಗಳ ಅಂಕಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡುವುದು. ಮತ್ತೊಂದೆಡೆ, 10 ನೇ ವಿದ್ಯಾರ್ಥಿಗಳಂತೆ, ಆಂತರಿಕ ಮೌಲ್ಯಮಾಪನವನ್ನು ಅಳವಡಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಅಂತಿಮ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ- ನೌಕರರ ಡಬ್ಬಲ್ ಧಮಾಕ.! ವೇತನ ಏರಿಕೆಗೆ ಕೂಡಿ ಬಂತು ಕಾಲ.! 30 ರೊಳಗೆ ಈ ಕೆಲಸ ಮುಗಿಸಿ..!

ಫಲಿತಾಂಶದ ಬಗ್ಗೆ ಅತೃಪ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಈ ಆಯ್ಕೆ ಇರುತ್ತದೆ:
ಪಿಎಂ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE), ಅಸ್ತಿತ್ವದಲ್ಲಿರುವ ವ್ಯವಸ್ಥೆಯಲ್ಲಿ ತೃಪ್ತರಾಗದ ವಿದ್ಯಾರ್ಥಿಗಳಿಗೆ ಒಂದು ಆಯ್ಕೆಯನ್ನು ನೀಡಲು ಎಂದು ನಿರ್ಧರಿಸಲಾಗಿದೆ. ಫಲಿತಾಂಶದ ಬಗ್ಗೆ ಅಸಮಾಧಾನಗೊಂಡ ವಿದ್ಯಾರ್ಥಿಗಳಿಗೆ ಕರೋನಾದ ಪರಿಸ್ಥಿತಿ ಸುಧಾರಿಸಿದ ಬಳಿಕ ಪರೀಕ್ಷೆಯನ್ನು ತೆಗೆದುಕೊಳ್ಳುವ ಅವಕಾಶವಿರುತ್ತದೆ. ಆದಾಗ್ಯೂ, ಕರೋನಾವೈರಸ್‌ನ ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ನಂತರವೇ, 12 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ- CBSE Class 12 Board Exam 2021 Cancelled: 12ನೇತರಗತಿ ಬೋರ್ಡ್ ಪರೀಕ್ಷೆಗಳು ರದ್ದು, ಪ್ರಧಾನಿ ಮೋದಿ ಸಭೆಯಲ್ಲಿ ನಿರ್ಧಾರ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರ:
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, 'ಸಿಬಿಎಸ್‌ಇಯ 12 ನೇ ತರಗತಿ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್ -19 ಶಿಕ್ಷಣ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರಿದೆ ಮತ್ತು ಮಂಡಳಿಯ ಪರೀಕ್ಷೆಗಳ ವಿಷಯವು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಅಪಾರ ಕಾಳಜಿಯನ್ನು ಉಂಟುಮಾಡುತ್ತಿದೆ, ಇದನ್ನು ಕೊನೆಗೊಳಿಸಬೇಕು. "ಇಂತಹ ಉದ್ವಿಗ್ನ ವಾತಾವರಣದಲ್ಲಿ, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವಂತೆ ಒತ್ತಡ ಹೇರಬಾರದು" ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Zee News Kannada

#Hashtags