ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರದಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಮುಂದುವರಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಿಗೆ ಕೆಲವು ವಿನಾಯಿತಿ, ಕೆಲವು ನಿರ್ಬಂಧ ಸಡಿಲಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
(Karnataka Lockdown Extension CM BS Yediyurappa Take note of Coronavirus Situation in state Decides to continue Lockdown in 10 districts)
ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಎಂಟು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊವಿಡ್ ಲಾಕ್ಡೌನ್ ವಿನಾಯಿತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು.
The post Karnataka Unlock Guidelines: 10 ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು ಅನ್ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ appeared first on TV9 Kannada.
Disclaimer
This story is auto-aggregated by a computer program and has not been created or edited by Dailyhunt Publisher: TV9 Kannada