Kannada News Now

1.8M Followers

BIG BREAKIG NEWS : ಕೋವಿಡ್ ಸೋಂಕಿನಿಂದ ಮೃತಪಟ್ಟ BPL ಕುಟುಂಬಕ್ಕೆ 1 ಲಕ್ಷ ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ

14 Jun 2021.1:03 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

BIG BREAKING NEWS : ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ನಟ ಸಂಚಾರಿ ವಿಜಯ್' ಇನ್ನಿಲ್ಲ

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಬಿಪಿಎಲ್ ಕುಟುಂಬದ ಒಬ್ಬರಿಗೆ ನೀಡಲಾಗುತ್ತದೆ.

ಮಂಡ್ಯ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಕಲಬೆರಿಕೆ ಮಾಡಿರೋದು ಬೆಳಕಿಗೆ ಬಂದಿದೆ. ಈಗಾಗಲೇ ಪ್ರಾಥಮಿಕ ತನಿಖೆಗೆ ಆದೇಶಿಸಲಾಗಿದೆ. ಒಕ್ಕೂಟ ವ್ಯವಸ್ಥಾಪಕರನ್ನು ಹಿಂಪಡೆದು, ಹೊಸ ವ್ಯವಸ್ಥಾಪಕರನ್ನು ನೇಮಿಸಲಾಗಿದೆ. 6 ಜನರನ್ನು ಅಮಾನತು ಮಾಡಲಾಗಿದೆ. ತಪ್ಪು ಎಸಗಿದಂತ ಹಾಲು ಉತ್ಪಾದಕರ ಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅವಘಾತದಿಂದ ನಿಧನರಾದಂತ ಸಂಚಾರಿ ವಿಜಯ್ ಅವರಿಗೆ ಸಂತಾಪ ವ್ಯಕ್ತ ಪಡಿಸುವೆ. ಅವರ ಕುಟುಂಬಕ್ಕೆ ನೋವು ಭರಿಸುವಂತ ಶಕ್ತಿ ಕೊಡಲಿ ಎಂಬುದಾಗಿ ಪ್ರರ್ಥಿಸಿದರು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags