ಬೆಂಗಳೂರು : ರಾಜ್ಯದ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷರುಗಳನ್ನು 2021-22ನೇ ಸಾಲಿಗೆ ಅದೇ ಸಂಸ್ಥೆಯಿಂದ ನಡೆಯುತ್ತಿರುವ ಮತ್ತೊಂದು ಶಾಲೆಗೆ ಅಥವಾ ಒಂದು ಸಂಸ್ಥೆಯ ಶಿಕ್ಷಕರು ಮತ್ತೊಂದು ಅನುದಾನಿತ ಸಂಸ್ಥೆಯ ಖಾಲಿ ಹುದ್ದೆಗೆ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂ ಪರಿಹಾರ : ಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರು, ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮ-1999ರ ನಿಯಮ-12ರನ್ವಯ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಸಂಸ್ಥೆಯಿಂದ ನಡೆಯುತ್ತಿರುವ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಸಂಸ್ಥೆಯ ಅನುದಾನಿತ ಶಿಕ್ಷಕರುಗಳನ್ನು ಮತ್ತೊಂದು ಅನುದಾನಿತ ಸಂಸ್ಥೆಯಿಂದ ನಡೆಯುತ್ತಿರುವ ಅನುದಾನಿತ ಶಾಲೆಯಲ್ಲಿನ ಖಾಲಿ, ಪರಸ್ಪರ ಹುದ್ದೆಗಳಿಗೆ ವರ್ಗಾಯಿಸಲು ಕೋರಿ ಸಂಸ್ಥೆಗಳು ಸಲ್ಲಿಸಿರುವ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ, ವರ್ಗಾವಣೆ ಬಯಸಿರುವ ಶಾಲೆಯಲ್ಲಿನ ಮಕ್ಕಳ ದಾಖಲಾತಿ, ಹಾಜರಾತಿಗೆ ಅನುಗುಣವಾಗಿ ಶಿಕ್ಷಕರ ಮಕ್ಕಳ ಅನುಪಾತ ( 1 : 40) ಅನುಗುಣವಾಗಿ ಶಿಕ್ಷಕರ ಅವಶ್ಯಕತೆಯ ಬಗ್ಗೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರುಗಳು ಪರಿಶೀಲಿಸಿ ಎಲ್ಲಾ ದೃಢೀಕೃತ ದಾಖಲೆಗಳ ಸಹಿತ ಸ್ಪಷ್ಟವಾದ ಶಿಪಾರಸ್ಸಿನೊಂದಿಗೆ ಸಲ್ಲಿಸಲು ಸೂಚಿಸಿದ್ದಾರೆ.
`SBI' ಗ್ರಾಹಕರಿಗೆ ಮಹತ್ವದ ಮಾಹಿತಿ : ನಾಳೆಯಿಂದ ಬದಲಾಗಲಿದೆ ʼವಿತ್ ಡ್ರಾʼ ನಿಯಮ, ಹೊಸ ಶುಲ್ಕ ಅನ್ವಯ!
ಇದಷ್ಟೇ ಅಲ್ಲದೇ ಶಿಫಾರಸ್ಸು ಇಲ್ಲದೇ ಸಲ್ಲಿಸುವಂತಹ ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗುವುದು ಎಂಬುದಾಗಿಯೂ ತಿಳಿಸಿದ್ದಾರೆ.
ಹೀಗಿವೆ ಪ್ರಮುಖ ದಿನಾಂಕಗಳು..
ಪ್ರಸ್ತಾವನೆಯೊಂದಿಗೆ ಸಲ್ಲಿಸಬೇಕಾದಂತ ದಾಖಲೆಗಳು
ವರದಿ : ವಸಂತ ಬಿ ಈಶ್ವರಗೆರೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now