ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ಮಧ್ಯೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಜುಲೈ.19 ಹಾಗೂ 22ರಂದು ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಇಂತಹ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಲಾಗಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದಲ್ಲಿ 'ಕಾಲೇಜು ಆರಂಭ' ಕುರಿತಂತೆ ಮಹತ್ವದ ಮಾಹಿತಿ ಹಂಚಿಕೊಂಡ 'ಡಿಸಿಎಂ ಅಶ್ವತ್ಥನಾರಾಯಣ'.!
ಇಂದು ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರವು ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆಯು ಕಡಿಮೆಗೊಂಡಿದೆ.
BIG BREAKING NEWS : 'ನಿರ್ಮಾಪಕ ರಾಕ್ ಲೈನ್ ವೆಂಕಟೇಶ್' ಮನೆಮೇಲೆ 'ಬಿಯರ್ ಬಾಟಲ್' ಎಸೆದು ಕಿಡಿಗೇಡಿಗಳ ದಾಳಿ
ಜುಲೈ.19 ಹಾಗೂ 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ನಿಗದಿಯಂತೆ ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಬಹು ಆಯ್ಕೆ ಮಾದರಿಯಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದೆ. ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಿರುವ ಕಾರಣದಿಂದಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರ ಮನವಿ ಮಾಡಿತು.
BIG BREAKING NEWS : ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಗುಡ್ ಬೈ
ಈ ಎಲ್ಲಾ ಮಾಹಿತಿಯನ್ನು ಆಲಿಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ನಾಗರತ್ನ ಹಾಗೂ ನ್ಯಾಮೂರ್ತಿ ಸಂಜೀವ್ ಕುಮಾರ್ ದ್ವಿಸದಸ್ಯ ಪೀಠವು, ಒತ್ತಾಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಬಾರದು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ನಡೆಸುವುದು ಸೂಕ್ತ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಜ್ಯ ಸರ್ಕಾರ ರೂಪಿಸಿರುವಂತ ಎಸ್ ಓಪಿ ಕ್ರಮಗಳನ್ನು ಪಾಲಿಸಬೇಕು ಎಂಬುದಾಗಿ ಅಭಿಪ್ರಾಯ ಪಟ್ಟು, ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಲ್ಲಿಕೆಯಾಗಿದ್ದಂತ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now