* ರಂಜಿತ್ ಶೃಂಗೇರಿ
ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪ್ರವಾಸಿಗರಿಗೆ ಗುಡ್ ನ್ಯೂಸ್ : ನಾಳೆಯಿಂದ 'KRS' ಬೃಂದಾವನ ಓಪನ್ : ಸಾರ್ವಜನಿಕರ ವೀಕ್ಷಣೆಗೆ ಅವಕಾಶ
ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ 'ಕೋವಿಡ್ 19' ಸೋಂಕು ನಿಯಂತ್ರಣದಲ್ಲಿರುವುದರಿಂದ ಸರ್ಕಾರವು ಅನ್ ಲಾಕ್-3 ಘೋಷಿಸಿ ಸರ್ಕಾರದ ಎಲ್ಲಾ ಇಲಾಖೆಗಳ ಸಿಬ್ಬಂದಿಗಳು ಶೇಕಡ 100 ರಷ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕೋವಿಡ್ ನಿಯಮ ಪಾಲನೆ ಮಾಡಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಉಪನ್ಯಾಸಕರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿತ್ತು. ಬಹುತೇಕ ಆನ್ಲೈನ್ ಪಾಠ ಸೇರಿದಂತೆ ಕಾಲೇಜಿನ ಬಹುತೇಕ ಕಾರ್ಯವನ್ನು ಮನೆಯಿಂದಲೇ ಮಾಡುತ್ತಿದ್ದರು. ಕೆಲವೇ ಕೆಲವು ಉಪನ್ಯಾಸಕರು ಮಾತ್ರ ಪ್ರಾಂಶುಪಾಲರ ಸೂಚನೆಯಂತೆ ಕಾಲೇಜಿಗೆ ಬರುತ್ತಿದ್ದರು. ಈಗ ರಾಜ್ಯಾದ್ಯಂತ ಅನ್ಲಾಕ್ ಘೋಷಣೆಯಾಗಿರುವುದರಿಂದ ಎಲ್ಲರೂ ಕಾಲೇಜಿಗೆ ಬರಲು ಸೂಚನೆ ನೀಡಲಾಗಿದೆ.
ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಸುಧಾಕರ್ ಮನವಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now