Kannada News Now

1.8M Followers

BREAKING NEWS : 'ರಾಜ್ಯ ಸರ್ಕಾರ'ದಿಂದ ನಾಳೆಯಿಂದ 'ಥಿಯೇಟರ್', ಜು.26ರಿಂದ 'ಪದವಿ ಕಾಲೇಜು'ಗಳ ಆರಂಭಕ್ಕೆ ಗ್ರೀನ್ ಸಿಗ್ನಲ್

18 Jul 2021.12:44 PM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ.

ಶಿವಮೊಗ್ಗ : ನಾಳೆಯಿಂದ SSLC ಪರೀಕ್ಷೆ ಆರಂಭ : ಜಿಲ್ಲೆಯಲ್ಲಿ 150 ಪರೀಕ್ಷಾ ಕೇಂದ್ರಗಳಲ್ಲಿ, 24,771 ವಿದ್ಯಾರ್ಥಿಗಳು ಬಾಗಿ

ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿದಿಸಲು ತೀರ್ಮಾನಿಸಲಾಗಿದೆ.

ಸಿನಿಮಾ ಥಿಯೇಟರ್, ರಂಗಮಂದಿರಗಳನ್ನು ಶೇ. 50ರಷ್ಟು ಜನರೊಂದಿಗೆ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿಸಿದೆ.

ಟೋಕಿಯೊ ಒಲಿಂಪಿಕ್ಸ್ ಗ್ರಾಮದಲ್ಲಿ ಇಬ್ಬರು ಆಥ್ಲೇಟ್ಸ್ ಗಳಿಗೆ ಕೊರೋನಾ ಪಾಸಿಟಿವ್

ಇನ್ನೂ ಜುಲೈ.26ರಿಂದ ಉನ್ನತ ಶಿಕ್ಷಣವನ್ನು ಪ್ರಾರಂಭ ಮಾಡಲು ಅವಕಾಶ ನೀಡಲಾಗಿದೆ. ಆದ್ರೇ ಒಂದು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಕಾಲೇಜಿಗೆ ಬರೋದಕ್ಕೆ ಅವಕಾಶ ನೀಡುವಂತ ತೀರ್ಮಾನವನ್ನು ಸಿಎಂ ಯಡಿಯೂರಪ್ಪ ನೇತೃತ್ವದ ಕೋವಿಡ್ ಉಸ್ತುವಾರಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags