ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
BIG NEWS : 2008 ರ ಮುಂಬೈ ದಾಳಿ ಪ್ರಕರಣದ ಆರೋಪಿ `ರಾಣಾ' ಭಾರತಕ್ಕೆ ಹಸ್ತಾಂತರ : ಅಮೆರಿಕ ಸಮ್ಮತಿ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ನಡೆದ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಜು.22ರಂದು ನಡೆಯಲಿರುವ ಭಾಷಾ ವಿಷಯಗಳ ಪರೀಕ್ಷೆಗೆ ಎಲ್ಲ ಸಿದ್ಧತೆಗಳಾಗಿವೆ ಎಂದು ತಿಳಿಸಿದರು.
ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಓಎಂಆರ್ ಶೀಟ್ ನಲ್ಲಿ ಗುರುತಿಸಬೇಕಷ್ಟೇ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ. 10ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now