ಬೆಂಗಳೂರು : ನಾನು ಪ್ರಮಾಣವಚನ ತೆಗೆದುಕೊಂಡ ಮೇಲೆ, ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಅಲ್ಲೇ ಸ್ಥಳದಲ್ಲಿಯೇ ಪರಿಹಾರವನ್ನು ಘೋಷಣೆ ಮಾಡಿದ್ದೇನೆ. ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದೇನೆ. ಸಾಮಾಜಿಕ ಭದ್ರತೆಯ ಯೋಜನೆಗಳ ಹಣವನ್ನು ಹೆಚ್ಚಿಗೆ ಮಾಡಿದ್ದೇನೆ. ಇದಾದ ನಂತ್ರ ಸಚಿವ ಸಂಪುಟದ ವಿಸ್ತರಣೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ಆದ ಮೇಲೆ. ಇದೀಗ ಪಟ್ಟಿ ಅಂತಿಮಗೊಂಡಿದೆ. ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಒಟ್ಟು 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಸಿಎಂ ಹುದ್ದೆಯನ್ನು ಈ ಬಾರಿ ಸೃಜಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Corona virus hike : ಮಂಗಳೂರು ವಿವಿ ಎಲ್ಲಾ ಪದವಿ ಕಾಲೇಜುಗಳ ಪರೀಕ್ಷೆಗಳು ಮುಂದೂಡಿಕೆ
ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ನಮ್ಮ ಪ್ರಧಾನ ಮಂತ್ರಿಗಳಾದಂತ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಮಾರ್ಗದಲ್ಲಿ ಈಗಾಗಲೇ ಹೇಳಿದಂತೆ ಜನಪರ ಆಡಳಿತ ಕೊಡುವ ಹಿನ್ನಲೆಯಲ್ಲಿ ಸಂಪುಟ ರಚನೆ ಮಾಡಲಾಗುತ್ತಿದೆ.
ಝಾನ್ಸಿ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಸರ್ಕಾರ ತೀರ್ಮಾನ
ಇಂದಿನ ಸಚಿವ ಸಂಪುಟ ರಚನೆಯಲ್ಲಿ 8 ಲಿಂಗಾಯಿತ ಸಮುದಾಯದವರು, 7 ಒಕ್ಕಲಿಗ ಸಮುದಾಯದವರಿ, 7 OBC ಸಮುದಾಯದವರು, 3 SC, 1 ST, 1 ರೆಡ್ಡಿ, 1 ಮಹಿಳಾ ಮತ್ತು 1 ಬ್ರಾಹ್ಮಣ ಸಮುದಾಯದವರು ಸೇರಿದಂತೆ ಒಟ್ಟು 29 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಘೋಷಣೆ ಮಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಕುರಿತಂತೆ ಬಿಜೆಪಿ ರಾಷ್ಟ್ರೀಯ ನಾಯಕರು ನೇರವಾಗಿಯೇ ಮಾತನಾಡಿ ಹೇಳಿದ್ದಾರೆ. ಆ ಕುರಿತು ನಾನು ಏನೂ ಹೇಳೋದಿಲ್ಲ. ಪಟ್ಟಿ ಬಿಡುಗಡೆಯಾದ ನಂತ್ರ, ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುದಾಗಿ ತಿಳಿಯಲಿದೆ. ಆದ್ರೇ.. ನಾನು ಇಷ್ಟು ಹೇಳಬಲ್ಲೇ.. ಈಗ ಏನ್ ರಾಜ್ಯಪಾಲರಿಗೆ ಪಟ್ಟಿ ಕಳುಹಿಸಲಾಗಿದೆಯೋ, ಅದರಲ್ಲಿ ವಿಜಯೇಂದ್ರ ಅವರ ಹೆಸರು ಇಲ್ಲ ಎಂಬುದಾಗಿ ತಿಳಿಸಲಾಗಿದೆ.
ಹೀಗಿದೆ.. ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವಂತ ಸಂಭಾವ್ಯ ಸಚಿವರ ಪಟ್ಟಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now