Kannada News Now

1.8M Followers

ನಡುರಸ್ತೆಯಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

16 Aug 2021.12:09 PM

ಗುಂಟೂರು: ಬಿ.ಟೆಕ್​ ವಿದ್ಯಾರ್ಥಿನಿಯೋರ್ವಳನ್ನು ಹಾಡುಹಗಲು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

`Whats App' ಬಳಕೆದಾರರೇ ಗಮನಿಸಿ : ವಾಟ್ಸಪ್ ನಲ್ಲಿ ಬರುವ ಲಿಂಕ್ ಕ್ಲಿಕ್ ಮಾಡುವ ಮುನ್ನ ಇದನ್ನು ಓದಿ

ಮೃತ ವಿದ್ಯಾರ್ಥಿನಿಯನ್ನು ಎನ್ . ರಮ್ಯಾ ಎಂದು ಗುರುತಿಸಲಾಗಿದೆ. ಈಕೆ ಇಂಜಿನಿಯರಿಂಗ್ ಮೂರನೇ ವರ್ಷದ ವಿದ್ಯಾರ್ಥಿನಿ. ಉಪಹಾರ ಸೇವನೆಗೆಂದು ಹೊರಟಿದ್ದ ಯುವತಿಗೆ, ಯುವಕನೋರ್ವ ಮನ ಬಂದಂತೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬೈಕ್​ನಲ್ಲಿ ಪರಾರಿಯಾಗಿದ್ದಾನೆ.

ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾಗಿದ್ದ ಈಕೆಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಯತ್ನಿಸಿದರೂ ಅಷ್ಟರಲ್ಲಾಗಲೇ ಸಾವನ್ನಪಿದ್ದಳು ಎಂದು ತಿಳಿದು ಬಂದಿದೆ.

Aadhaar card : ಆಧಾರ್ ಕಾರ್ಡ್ ವಿಳಾಸ ಬದಲಾವಣೆ ಪ್ರಕ್ರಿಯೆ ಬದಲಾವಣೆ!

ಘಟನೆ ಬಳಿಕ ಕಾರ್ಯಪ್ರವೃತ್ತರಾದ ಗುಂಟೂರು ನಗರ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ವೈ ಯೆಸ್ ಜಗನ್ ಮೋಹನ್ ರೆಡ್ಡಿ ಸಂತ್ರಸ್ತೆಯ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

e-Pan Card : ಕೇವಲ 10 ನಿಮಿಷದಲ್ಲಿ `ಇ-ಪ್ಯಾನ್' ಪಡೆಯಬಹುದು! ಹೇಗೆ ಗೊತ್ತಾ?



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags