Kannada News Now

1.8M Followers

BIGG NEWS : 'NPS ನೌಕರ'ರಿಗೆ ಸಿಹಿ ಸುದ್ದಿ : ನಿವೃತ್ತಿ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಒದಗಿಸಿ ಸರ್ಕಾರ ಆದೇಶ

19 Aug 2021.8:50 PM

ಬೆಂಗಳೂರು : ದಿನಾಂಕ 1:4:2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ನೇಮಕ ಹೊಂದಿರುವ ಹೊಸ ವ್ಯಾಖ್ಯಾನಿಸಿದ ಅಂಶದಾಯಿ ಪಿಂಚಣಿ ಕೊಡುಗೆ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಮತ್ತು ಮರಣ ಉಪದಾನ ಹಾಗೂ ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕುಮಟಾ ಪ್ರಕಾಶ್ ಆದೇಶ ಹೊರಡಿಸಿದ್ದು, ದಿನಾಂಕ 01:04:2106 ರಂದು ಹಾಗೂ ಸರ್ಕಾರಿ ಸೇವೆಗೆ ಸೇರಿದ ಹೊಸ ವ್ಯಾಖ್ಯಾನಿಸಿದ ಅಂಶದಾಯಿ ಪಿಂಚಣಿ ಕೊಡುಗೆ ಯೋಜನೆಯಡಿ ಬರುವ ಸರ್ಕಾರಿ ನೌಕರರಿಗೆ ನಿವೃತ್ತಿ ಮತ್ತು ಮರಣ ಉಪದಾನ ಹಾಗೂ ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಿನಾಂಕ 01:04:2018 ರಂದು ಅಥವಾ ತದನಂತರ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಹೊಸ ವ್ಯಾಖ್ಯಾನಿಸಿದ ಅಂಶದಾಯಿ ಪಿಂಚಣಿ ಕೊಡುಗೆ ಯೋಜನೆಯ ವ್ಯಾಪ್ತಿಗೆ ಬರುವ ಸರ್ಕಾರಿ ನೌಕರರ ಅವಲಂಬಿತರು ಆಯ್ಕೆ ಮಾಡಿಕೊಂಡಲ್ಲಿ, ಮೃತ ನೌಕರರ ಪಿಂಚಣಿ ನಿಧಿಯಲ್ಲಿ ಕ್ರೋಢೀಕೃತವಾದ ಮೊತ್ತವನ್ನು ಸರ್ಕಾರ ಹಿಂಪಡೆಯುವ ಷರತ್ತಿನೊಂದಿಗೆ ಸರ್ಕಾರಿ ನೌಕರರ ( ಕುಟುಂಬ ಪಿಂಚಣಿ) ನಿಯಮಗಳು 2002 ರ ಅನ್ವಯ ಕುಟುಂಬ ಪಿಂಚಣಿ ಸೌಲಭ್ಯವನ್ನು ವಿಸ್ತರಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags