*ಅಕ್ಷರ ಜೊತೆಗೆ ವಸಂತ್ ಬಿ ಈಶ್ವರಗೆರೆ
ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಶುರುವಾಗಲಿದೆ ಅಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫ್ರೌಢ ಶಿಕ್ಷಣ ಮಂಡಳಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಫಲಿತಾಂಶ ಪ್ರಕಟಿಸಿದ ಬಳಿಕ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಮಾತನಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಲು ತಂದೆ -ತಾಯಿ ಹೆದರುತ್ತಿದ್ದಾರೆ ಅಂಥ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ರೀತಿಯಲ್ಲಿ ಅಡೆ ತಡೆ ಇಲ್ಲದೇ ಮಕ್ಕಳಲ್ಲಿ ಸೊಂಕು ಉಂಟಾಗಾದಂತೆ ನಡೆಸಲಾಗಿದೆ, ಯಶಸ್ವಿಯಾಗಿ ಕೂಡ ಪರೀಕ್ಷೆ ಮುಗಿದಿದೆ ಈ ಹಿನ್ನಲೆಯಲ್ಲಿ ಮಕ್ಕಳ ತಂದೆ-ತಾಯಿಯಗಳು ಶಾಲೆಗೆ ಕಳುಹಿಸುತ್ತಾರೆ ಎನ್ನುವ ನಂಬಿಕೆ ಇದೇ ಅಂತ ಹೇಳಿದರು.
ಇನ್ನು ಈ ವೇಳೆ ಭಾಗವಹಿಸಿದ 99.9% ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಇನ್ನು ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವ್ರನ್ನ ಪರೀಕ್ಷೆ ಬರೆಯಲು ಕಳುಹಿಸಿದ್ದು, ಆತ ಸಿಕ್ಕಿಬಿದ್ದಿರೋದ್ರಿಂದ ಆ ವಿದ್ಯಾರ್ಥಿಯನ್ನ ಪರೀಕ್ಷೆಯಲ್ಲಿ ಫೇಲ್ ಮಾಡಲಾಗಿದೆ ಎಂದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now