ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್ ಚುರುಕು ಮುಟ್ಟಿಸಿದೆ.
ಜನಪ್ರತಿನಿಧಿಗಳು ಅಥವಾ ಪ್ರಭಾವಿಗಳಿಗೆ ಸಂಬಂಧಿಸಿದ ವಿವಾದಿತ ಕೇಸ್ಗಳನ್ನು ವಿಚಾರಣೆ ಮಾಡುವಾಗ ಆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ಆ ಪ್ರಕರಣದ ತೀರ್ಪಿನ ಮೇಲೆ ಪ್ರಭಾವ ಬೀರುವ ಕೆಲಸ ಘಟನೆಗಳು ನಡೆದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ.
ಈ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್ಗಳ ರಿಜಿಸ್ಟ್ರಾರ್ಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇದನ್ನೂ ಓದಿ: ಅಭ್ಯರ್ಥಿಯಾಗಿ ನೇಮಕವಾದ 48 ಗಂಟೆಯೊಳಗೆ ಜನಪ್ರತಿನಿಧಿಗಳ ಅಪರಾಧ ಜಾತಕ ಸಾರ್ವಜನಿಕಗೊಳಿಸಲೇಬೇಕು: ಸುಪ್ರೀಂ ಕೋರ್ಟ್
ನಕಲಿ ಟ್ವಿಟರ್ ಖಾತೆ: ಪೊಲೀಸರಿಗೆ ದೂರು ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ
(Criminal cases against MPs MLAs can not be withdrawn without High Court approval Supreme Court orders)
Disclaimer
This story is auto-aggregated by a computer program and has not been created or edited by Dailyhunt Publisher: TV9 Kannada