Kannada News Now

1.8M Followers

BIG NEWS : ಬೈಕ್ ಅಪಘಾತದಲ್ಲಿ ಮೂರನೇ ಸವಾರನೂ ವಿಮೆಗೆ ಅರ್ಹ : ಹೈಕೋರ್ಟ್ ನಿಂದ ಮಹತ್ವದ ಆದೇಶ

12 Sep 2021.07:17 AM

ಬೆಂಗಳೂರು : ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

Weather Update : ರಾಜ್ಯದಲ್ಲಿ ಸೆ.15 ರವರೆಗೆ ಭಾರೀ ಮಳೆ : 7 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು ಮೋಟಾರು ವಾಹನ ನ್ಯಾಯಮಂಡಳಿ 2012ರಲ್ಲಿ ನೀಡಿದ್ದ ಆದೇಶವನ್ನು ವಿಮಾ ಕಂಪನಿ ಪ್ರಶ್ನಿಸಿತ್ತು.

ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುವ ಮೂಲಕ ವಿಮಾ ಷರತ್ತು ಉಲ್ಲಂಘಿಸಲಾಗಿದೆ. ಬೈಕ್ ಸವಾರ ಸರಿಯಾದ ಚಾಲನಾ ಪರವಾನಗಿಯನ್ನೂ ಹೊಂದಿಲ್ಲ ಎಂದು ವಿಮಾ ಕಂಪನಿ ಕಂಪನಿ ಆರೋಪಿಸಿತ್ತು.

ಮನೆ ಬಾಗಿಲಿಗೆ ಪಿಂಚಣಿ : ವೃದ್ಧಾಪ್ಯ ವೇತನದ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ಪೀಠ,ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ವ್ಯಕ್ತಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಬೈಕ್‌ ಅಪಘಾತ ಸಂದರ್ಭದಲ್ಲಿ ಅದರಲ್ಲಿ ಮೂವರು ಸವಾರಿ ಮಾಡುತ್ತಿದ್ದರೆ, ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಆದೇಶಿಸಿದೆ.

Karnataka Bandh : ಸೆಪ್ಟೆಂಬರ್ 27 ಕ್ಕೆ ಕರ್ನಾಟಕ ಬಂದ್ : ರೈತ ಮುಖಂಡ ಕುರುಬೂರು ಶಾಂತಕುಮಾರ್



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags