ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ ನಡೆಸೋ ಬಗ್ಗೆ ಚಿಂತನೆ ನಡೆಸಲಾಗಿರೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಪಡಿತರದಾರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ನ.26ರಿಂದ ಮನೆ ಬಾಗಿಲಿಗೆ ತಲುಪಲಿದೆ 'ಪಡಿತರ ಧಾನ್ಯ'
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ 1 ರಿಂದ 5ನೇ ತರಗತಿ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವಂತ ಸಲಹೆ ಆಧರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳುವಂತ ಚಿಂತನೆ ಇಲ್ಲ. ಪಠ್ಯ ಕ್ರಮ ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸೋದಕ್ಕಾಗಿ ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆಯಿದೆ. ಆ ಬಗ್ಗೆ ಶೀಘ್ರವೇ ಸಿಎಂ ನೇತೃತ್ವದಲ್ಲಿ ನಡೆಯಲಿರುವಂತ ಸಭೆಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ಜ.26ರಿಂದ 'ನಿಮ್ಮ ಮನೆ ಬಾಗಿಲಿಗೆ' ತಲುಪಲಿವೆ ಸರ್ಕಾರದ ಯೋಜನೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now